Tuesday 12 December 2017

ಪರೇಶ್ ಮೇಸ್ತ ಕೊಲೆ ಪ್ರಕರಣ-ರಾಷ್ಟ್ರೀಯ ತನಿಖಾ ತಂಡಕ್ಕೆ ಒಪ್ಪಿಸಿ- ಡಿ.ಎನ್.ಜೀವರಾಜ್ ಆಗ್ರಹ

ಹೊನ್ನಾವರ ಪರೇಶ್ ಮೇಸ್ತ ಕೊಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆದ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA)ಗೆ ಒಪ್ಪಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ವಿಧಾನ ಸೌಧ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು..

ಮಾನ್ಯ ಶಾಸಕರಾದ ಡಿ.ಎನ್ ಜೀವರಾಜ್ ಮಾತನಾಡಿ ಈ ನಾಡು ಕುವೆಂಪು ನುಡಿದಂತೆ ಸರ್ವಜನಾಂಗದ ಶಾಂತಿಯ ತೋಟವಿದ್ದಂತೆ ಆದರೇ ಈ ಕಾಂಗ್ರೇಸ್ ನೇತೃತ್ವದ ಸಿದ್ದರಾಮಯ್ಯನವರ ಸರ್ಕಾರ  ಕೇವಲ ಮುಂದಿನ ಚುನಾವಣೆಯಲ್ಲಿ ಹೇಗಾದರೂ ಗೆಲ್ಲಲೇ ಬೇಕೆಂಬ ಹಟಕ್ಕೆ ಬಿದ್ದು ಜಾತಿ ಜಾತಿಗಳ ನಡುವೆ ಸಂಘರ್ಷವೇರ್ಪಡುವಂತೆ ಮಾಡಿ ಅಮಾಯಕರು ಪ್ರಾಣಕಳೆದುಕೊಳ್ಳುವಂತಾಗಿದ್ದು. ಕೂಡಲೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾತಂಡಕ್ಕೆ ವಹಿಸಬೇಕೆಂದು ನುಡಿದರು.


ವಿಧಾನಪರಿಷತ್ ವಿರೋದಪಕ್ಷದ ನಾಯಕ ಶ್ರೀ ಈಶ್ವರಪ್ಪನವರು ಹಾಗೂ ಮಾಜಿ ಡಿ.ಸಿ.ಎಂ ಆರ್ ಅಶೋಕ್ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.